• Uncategorised

ವಿನಯ್ ಮಾಡಿದ ಹುಚ್ಚುತನಕ್ಕೆ ಜೈ.ಲು ಸೇರಿದ ಕಾರ್ತಿಕ್, ಸಂಗೀತ ಆಸ್ಪತ್ರೆಗೆ

ವಾರವಿಡಿ ನಡೆದ ರಕ್ಕಸ-ಗಂಧರ್ವರ ಕಾಳಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ವಾರಾಂತ್ಯದ ಎಪಿಸೋಡಿನ ಹೊಸ್ತಿಲಲ್ಲಿ ಎಲ್ಲ ಸ್ಪರ್ಧಿಗಳೂ ನಿಂತಿದ್ದಾರೆ. ಈ ನಡುವೆ ಪ್ರತಿ ವಾರದ ವಾಡಿಕೆಯಂತೆ ಕಳಪೆ ಮತ್ತು ಉತ್ತಮ ಪಟ್ಟಗಳನ್ನೂ ಮನೆಯ ಸದಸ್ಯರು ನಿರ್ಧರಿಸಿದ್ದಾರೆ. ಈ ವಾರದ ಕಳಪೆ ಪಟ್ಟ ಸಿಕ್ಕಿದ್ದು ಯಾರು ಎಂಬುದಕ್ಕೆ ಜಿಯೋಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಉತ್ತರ ಸಿಕ್ಕಿದೆ.

ಸ್ನೇಹಿತ್‌, ನಮ್ರತಾ, ವಿನಯ್ ಸೇರಿದಂತೆ ಬಹುತೇಕ ಸದಸ್ಯರು ಕಳಪೆ ಪಟ್ಟವನ್ನು ಕಾರ್ತಿಕ್‌ಗೆ ನೀಡಿದ್ದಾರೆ. ಅವರು ನೀಡಿದ ಕಾರಣ, ಕಾರ್ತಿಕ್‌ ಚಪ್ಪಲಿಯಲ್ಲಿ ಹೊಡೆಯಲು ಮುಂದಾಗಿದ್ದು’. ವಿನಯ್ ಅವರಂತೂ, ಈ ವಾರ ಖಂಡಿತವಾಗಿಯೂ ನೀನು ಕಳಪೆ ಪಟ್ಟಕ್ಕೆ ಅರ್ಹ ಎಂದು ನೇರವಾಗಿ ಹೇಳಿಯೇ ಕಳಪೆ ಪಟ್ಟ ನೀಡಿದ್ದಾರೆ. ಅದನ್ನು ಕಾರ್ತಿಕ್‌ ಕೈಮುಗಿದು ನಗುನಗುತ್ತಲೇ ಸ್ವೀಕರಿಸಿದ್ದಾರೆ ಸಹ.

ಜೈಲು ಉಡುಗೆ ತೊಟ್ಟ ಕಾರ್ತಿಕ್‌, ಕೃಷ್ಣ ಜನ್ಮಸ್ಥಾನಕ್ಕೆ ಹೋಗ್ತಿದೀನಪ್ಪಾ ಎಂದುಹೇಳಿ ಜೈಲು ಕೊಠಡಿಯೊಳಗೆ ಇಳಿದಿದ್ದಾರೆ. ವರ್ತೂರು ಮತ್ತು ತನಿಷಾ ಇಬ್ಬರೂ ಸೇರಿ ಕಾರ್ತಿಕ್ ಅವರನ್ನು ಜೈಲಿನ ಬಾಗಿಲಿಗೆ ಬಂದು ಬೀಳ್ಕೊಟ್ಟಿದ್ದಾರೆ. ಈ ವಾರ ಮನೆಯ ಕ್ಯಾಪ್ಟನ್ ಆಗಿರುವ ಸ್ನೇಹಿತ್‌ ವಿಶೇಷ ಅಧಿಕಾರವನ್ನು ಪಡೆದಿದ್ದರು. ಆ ಅಧಿಕಾರದ ಪ್ರಕಾರ ಮನೆಯೊಳಗಿನ ಹಲವು ಸಂಗತಿಗಳ ಬಗ್ಗೆ ಅವರ ನಿರ್ಧಾರವೇ ಅಂತಿಮವಾಗಿತ್ತು.

ಅಲ್ಲದೆ ಮನೆಯಲ್ಲಿ ತಂಡಗಳನ್ನು ರಚಿಸುವ, ವಾರವಿಡೀ ಬಿಗ್‌ಬಾಸ್ ನೀಡುವ ಟಾಸ್ಕ್‌ಗಳ ಉಸ್ತುವಾರಿ ವಹಿಸುವ ಜವಾಬ್ದಾರಿಯನ್ನೂ ಸ್ನೇಹಿತ್‌ಗೆ ಒಪ್ಪಿಸಲಾಗಿತ್ತು. ಆದರೆ ವಾರಾಂತ್ಯದಲ್ಲಿ ಬಿಗ್‌ಬಾಸ್‌, ಸ್ನೇಹಿತ್‌ಗೆ ಮತ್ತೊಂದು ಜವಾಬ್ದಾರಿ ವಹಿಸಿದ್ದಾರೆ. ಮನೆಯ ಸದಸ್ಯರ ಪೈಕಿ ಕ್ಯಾಪ್ಟನ್ ಪಟ್ಟಕ್ಕೆ ಸ್ಪರ್ಧಿಸಲು ಅನರ್ಹರಾದ ಸದಸ್ಯರನ್ನು ಸೂಚಿಸಿ ಎಂದು ಬಿಗ್‌ಬಾಸ್ ಕೇಳಿದ್ದಾರೆ. ಇದಕ್ಕೆ ಎಲ್ಲರೂ ಅಚ್ಚರಿ ಪಡುವಂತೆ ಸ್ನೇಹಿತ್ ನಾಮಿನೇಟ್ ಮಾಡಿದ್ದಾರೆ. ಈ ಕುರಿತ ವಿವರ ಇಂದಿನ ಬೆಳಗ್ಗಿನ ಪ್ರಮೋದಲ್ಲಿ ದೊರಕಿತ್ತು.

ಇನ್ನು ಕಾರ್ತೀಕ್ ಮಾತ್ರ ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮಕ್ಕೆ ಕಾಯುತ್ತಿದ್ದಾರೆ. ಯಾರು ಬೇರೆಯವರ ಮೇಲೆ ವಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೋ ಅವರಿಗೆ ಕಿಚ್ಚ ಸರ್ ಸರಿಯಾಗಿಯೇ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂದು ಭರವಸೆಯ ಮಾತನಾಡುತ್ತಲೇ ಜೈಲಿನ ಒಳಗೆ ಸೇರಿಕೊಂಡಿದ್ದಾರೆ.

You may also like...