• Uncategorised

ನೇಹಾ ಕೊ.ಲೆಗಾರನಿಗೆ ಗಲ್ಲು ಶಿಕ್ಷೆ? ಫಯಾಜ್ ನನ್ನು ನಾಯಿಯಂತೆ ಕರೆದುಕೊಂಡು ಹೋದ ಪೊ ಲೀಸರು

ಕರುನಾಡ ಜನರ ಬೆಚ್ಚಿ ಬೀಳಿಸಿದ್ದ ಪ್ರಕರಣಗಳಲ್ಲಿ ಇದು ಒಂದು. ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿದೆ. ಕೊಲೆ ಮಾಡಿದ ಆರೋಪಿ ಫಯಾಜ್ನನ್ನು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.

ಆರೋಪಿ ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಬಿಟ್ಟಿದ್ದಾನೆ.ನೇಹಾ ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ ಎಂದು ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಹೇಳಿದ್ದಾನೆ. ಅಲ್ಲದೆ ಅವತ್ತು ಏನೆಲ್ಲ ಘಟನೆ ನಡೆಯಿತು ಎಂಬುವುದನ್ನು ವಿವರಿಸಿದ್ದಾನೆ.

ಘಟನೆ ನಡೆಯುವುದಕ್ಕೂ ಮುಂಚೆಯೇ ಕಾಲೇಜು ಬಿಟ್ಟಿದ್ದೆ. ಒಂದು ವಾರದ ಹಿಂದೆ ಕಾಲೇಜ್ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ನೇಹಾ ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡಿ, ಹೊರಟು ಹೋದಳು. ಅದು ಮನಸ್ಸಿಗೆ ಬೇಸರ ಮೂಡಿಸಿತು.

ಹಾಗಾಗಿ ಏಪ್ರಿಲ್​ 18 ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬಂದಿದ್ದಳು. ನಾನು ಮತ್ತೆ ಅಂದು ಕಾಲೇಜಿಗೆ ಹೋದೆ. ಪರೀಕ್ಷೆ ಮುಗಿಯುವವರೆಗೂ ಕಾಯ್ದೆ. ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಹತ್ತು ಬಾರಿ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ, ಅವಳು ಮಾತಾಡಲ್ಲ ಅಂದಳು ನಾನು ಚಾಕು ಹಾಕಿದ್ದೇನೆ ಅಷ್ಟೇ ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.

ಇನ್ನು ನಿನ್ನೆ ಆರೋಪಿಯನ್ನು ಕೊಲೆಯಾದ ಜಾಗಕ್ಕೆ ಕರೆದೊಯ್ದಿದ್ದ ಪೊಲೀಸರು, ಸ್ಥಳ ಮಹಜರು ನಡೆಸಿದರು. ಕೇಂದ್ರ ಕಾರಾಗೃಹದಿಂದ ಆರೋಪಿಯ ಆರೋಗ್ಯ ತಪಾಸಣೆ ನಡೆಸಿದ ಪೊಲೀಸರು ಆನಂತರ ಸಿಐಡಿ ಅಧಿಕಾರಿಗಳು ನೇರವಾಗಿ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿಗೆ ಕರೆದೊಯ್ದ ಪೊಲೀಸರು ಅಲ್ಲಿ ಘಟನೆ ನಡೆದಿದ್ದರ ಬಗ್ಗೆ ಸಿಐಡಿ ಅಧಿಕಾರಿಗಳು ಆರೋಪಿಯಿಂದ ಮಾಹಿತಿ ಪಡೆದಿದ್ದಾರೆ.

You may also like...