• Uncategorised

‘ಭಗವಾನ್ ಶ್ರೀರಾಮನ ಬಗ್ಗೆ ವ್ಯಂಗ್ಯ ಮಾಡಿ ನಮ್ಮಿಂದ ತಪ್ಪಾಯ್ತು’ ಹಿಂದೂಗಳ ಮುಂದೆ ಕೈಮುಗಿದ ಶಿಕ್ಷಕಿ

500 ವರ್ಷಗಳ ಹೋರಾಟದ ಬಳಿಕ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಈ ಐತಿಹಾಸಿಕ ದಿನ ನಮ್ಮೆಲ್ಲರಿಗೂ ಅತ್ಯಂತ ಮಹತ್ವ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಆಚರಿಸಲು ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

ಶ್ರೀರಾಮ ಪ್ರಾಣಪ್ರತಿಷ್ಠೆ ಅತ್ಯಂತ ಪವಿತ್ರವಾಗಿದೆ. ಹೀಗಾಗಿ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ಸಂಭ್ರಮಿಸಲು ಕೆಲ ಸೂಚನೆ ನೀಡಲಾಗಿದೆ. ಶಾಂತಿ ಯುತವಾಗಿ ಸಂಭ್ರಮ ಆಚರಿಸಿ, ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಮನೆಯಲ್ಲೇ ದೀಪ ಬೆಳಗಿ ರಾಮನ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ಪ್ರಾಣಪತಿಷ್ಠೆಯಲ್ಲಿ ಪಾಲ್ಗೊಳ್ಳಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಶಾಂತಿಯುತವಾಗಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಭ್ರಮದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ.ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗುತ್ತಿದೆ. ಬರೋಬ್ಬರಿ 7 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಪ್ರತಿಯೊಬ್ಬ ಗಣ್ಯರಿಗೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುವುದು. ದೇವಾಲಯ ಟ್ರಸ್ಟ್‌ನ ಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಗಣ್ಯರನ್ನು ಭೇಟಿ ಮಾಡಿ ಆಹ್ವಾನ ನೀಡಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧಿಕಾರಿಗಳು ಹೇಳಿದ್ದಾರೆ. 

You may also like...